ತೇಜಸ್ವಿಯವರನ್ನೊಮ್ಮೆ ಭೇಟಿ ಮಾಡಿದಾಗ ಅವರು ತುಂಬಾ ಸಾವಧಾನವಾಗಿ ಮಾತನಾಡುತ್ತಿದ್ದರು. ಅದು ಅವರ ಪಕ್ಷಿಗಳ ಫೋಟೋ ಪ್ರದರ್ಶನ ಕಾರ್ಯಕ್ರಮ “ಚಿತ್ರಕಲಾ ಪರಿಷತ್ತಿನಲ್ಲಿ”. ಅವತ್ತು ತಪ್ಪಿಸಿಕೊಂಡು ತಿರುಗುತ್ತಿದ್ದ ಪಕ್ಷಿಯೊಂದರ ಬಗ್ಗೆ ಅವರು ಹೇಳಿದ್ದು, ಅದರ ಕಷ್ಟ ಕೋಟಲೆಗಳು, ಅದಕ್ಕೆ ಬೇಕಾಗುವ ತಾಳ್ಮೆ, ಏಕಾಗ್ರತೆ, ದುಬಾರಿ ಕ್ಯಾಮೆರಾ ಮತ್ತದರ ಲೆನ್ಸ್ ಗಳು, ಫೋಟೋ ತೆಗೆದನಂತರ ಮಾಡುವ ಡಿಜಿಟಲ್ ಬದಲಾವಣೆಗಳು ಇತ್ಯಾದಿ. ಅವರನ್ನು ಶಾರ್ಟ್ ಟೆಂಪೆರ್ ಅನ್ನುತ್ತಿದ್ದವರಿಗೆ ಇದೆಲ್ಲ ಅರ್ಥವಾದರೆ ಅದು ಬೇರೆಯೇ ಸಾಧ್ಯತೆಗಳನ್ನ ಹೊಮ್ಮಿಸೀತು ಅನ್ನಿಸಿದೆ ನನಗೆ. ಮಾಯಾಲೋಕ - ೧ ಬಂದಾಗ ಅದನ್ನು ಓದಿ ನಂತರ ಅಂತಹಾ ಎಂಟು ಲೋಕಗಳನ್ನು ಬರೆಯುವ ಅವರ ಯೋಜನೆಯನ್ನು ಎಲ್ಲೋ ಕೇಳಿ ಕಾತರಿಸಿದ್ದೆವು ಆದರೆ ಅವರೇ ಇಲ್ಲವಾದರು! ಅರ್ಬನ್ ಪರಿಸರದಲ್ಲಿ ಹುಟ್ಟಿದ ಹುಡುಗರಿಗೆ ಅವರು ನೋಡಿರದ ಲೋಕವೊಂದರ ಅನೂಹ್ಯತೆಯನ್ನ ಹಾಗೆಯೇ ಸೆಮಿ ಅರ್ಬನ್ ಅಥವಾ ಹಳ್ಳಿ ಗಳಲ್ಲಿ ಹುಟ್ಟಿ ಪಟ್ಟಣಕ್ಕೆ ಬಂದ ಹುಡುಗ/ಗಿಯರಿಗೆ ಅವರು ಬಿಟ್ಟು ಬಂದ ಮತ್ತು ಬಹುಶ ಮತ್ತೆ ಹೋಗಲಾಗದ (?) ಪರಿಸರವೊಂದರ ಅದರ ಅಗಾಧ ಸೆಳೆತವನ್ನ ತೇಜಸ್ವಿಯವರ ಬರಹಗಳು ಉಳಿಸಿಕೊಂಡಿರುವುದರಿಂದ ಅದು ಇವತ್ತಿಗೂ ತನ್ನ ಸೆಳೆತವನ್ನು ಹೆಚ್ಚಿಸಿಕೊಳ್ಳುತ್ತಿದೆ. ನಾವು ಬಯಸಿದ ಆದರೆ ಬದುಕಲಾರದ ಬದುಕು ಸದಾ ಸೆಳೆಯುತ್ತಲೇ ಇರುತ್ತದೆ ಥೇಟ್ ತೇಜಸ್ವಿಯ ಹಾಗೇ! ಇಲ್ಲಿರುವ ಎಲ್ಲ ಪ್ರಸಂಗಗಳೂ ಅವರನ...
ದೇವರ ತೇರಿಗೂ ಗಾಲಿಗಳು ಬೇಕು… “ಮರದೊಳಗಡಗಿದ ಬೆಂಕಿಯಂತೆ ಎಲ್ಲೋ ಅಡಗಿದೆ ಬೇಸರ ಏನೋ ತೀಡಲು ಏನೋ ಕಾಡಲು ಹೊತ್ತಿ ಉರಿವುದು ಕಾತರ “ ….ಗೋ ಕೃಷ್ಣ ಅಡಿಗ ಭವ್ಯರ ಕವನಗಳನ್ನ ನಾನು ಮೊದಲು ಓದಿದ್ದು ಅವಧಿ ತಾಣದಲ್ಲಿ. ಬಹುಶ ಬುದ್ಧನ ಬಗ್ಗೆ ಅನ್ನಿಸುತ್ತದೆ. ಅವರು ಬುದ್ಧನನ್ನ reimagine ಮಾಡಿದ್ದರು. ನಂತರ ಅವರ ನೇರ ವಾಚನವನ್ನ ಸುಚಿತ್ರದಲ್ಲಿ ಕೇಳಿದ್ದು. ಅವತ್ತು ಜಿ ಏನ್ ಮೋಹನ್ ಸರ್ ಮತ್ತು ಉಮಾ ಮುಕುಂದ ಅವರೂ ಕೂಡಾ ತಮ್ಮ ತಮ್ಮ ಕವನಗಳನ್ನ ಓದಿದ್ದರು. ಭವ್ಯ ನನಗೆ ನಮ್ಮಂತೆ ಅನ್ನಿಸಿದ್ದರು…ಅಂದರೆ ಈಗೀಗ ಕಾವ್ಯ ಸಹವಾಸದಲ್ಲಿರುವವರು “ ಬರೆದ ಸಾಲಿಗೆ, ಹೊಳೆದ ತಾರೆಗೆ ನಿಬ್ಬೆರಗಾಗೋ ರೀತಿ!” ಒಂದೇ ಆಗಿತ್ತು. ಅವತ್ತು ಅವರು ತಮ್ಮಲ್ಲಿ ಕವಿತೆ ಹುಟ್ಟುವಿಕೆಯ ಕಿಡಿಯ ಬಗ್ಗೆ ಹೇಳಿಕೊಂಡಿದ್ದರು. ಅವರು ಕವಿತೆಯನ್ನ ಬರೆದಷ್ಟೇ ಚೆನ್ನಾಗಿ ಓದುತ್ತಾರೆ ಅನ್ನಿಸಿತು. ಅವೆಲ್ಲವನ್ನ ಪುಸ್ತಕ ರೂಪದಲ್ಲಿ ತರಲು ಸಾಕಷ್ಟು ಸಮಯ ಕೊಂಡರು ಅನ್ನಿಸಿದರೂ, ಈ ಸಂಕಲನದ ಪರಿಚಯದ ಮಾತುಗಳು ಹೊಸದಾಗಿ ಬರೆಯುವವರಿಗೆ ತೋರುಬೆರಳಿನಂತಿದೆ. ಕೆ ವೈ ಏನ್ ಅವರ ಸೊಗಸಾದ ಪ್ರವೇಶಿಕೆ ಭವ್ಯರನ್ನು, ನಮ್ಮನ್ನು ಕಾವ್ಯದ ಮತ್ತು ಬರೆವಣಿಗೆಯ ದಾರಿಯ ಹಳ್ಳ ದಿಬ್ಬಗಳ ಬಗ್ಗೆ ಎಚ್ಚರಿಸುತ್ತದೆ. ಏನನ್ನು ಕಾಣಬೇಕು ಎಂಬುದನ್ನು ಸೂಕ್ಷ್ಮವಾಗಿ ತಿಳಿಸುತ್ತದೆ. ಆರತಿ ಹೆಚ್ ಏನ್ ರವರ ಸಾಲುಗಳು ಸಭ್ಯತೆಯನ್ನು ಮೀರದ ಭವ...